Top News

ಒಂದು ದೇಶ, ಒಂದು ಚುನಾವಣೆಗೆ ಅಭಿಯಾನ ನಡೆಸಬೇಕು: ಶಿವರಾಜ್ ಸಿಂಗ್ ಚೌಹಾಣ್ ಕರೆ


ದೇಶದಲ್ಲಿ ಒಂದಿಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ. ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ ಪರಿಹಾರ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆಗೆ ಎಲ್ಲರೂ ಬೆಂಬಲಿಸಬೇಕು. ಇದಕ್ಕಾಗಿ ಸಾರ್ವಜನಿಕರೇ ಅಭಿಯಾನ ನಡೆಸಬೇಕು ಎಂದು ಕರೆ ನೀಡಿದರು.

Post a Comment

ನವೀನ ಹಳೆಯದು