ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ವಿತರಣೆ: ವಿಜಯಪುರಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಶಿವಾನಂದ ಪಾಟೀಲ

ಶಾಲಾ ಮಕ್ಕಳಿಗೆ ಆರೋವರ್ಧಕವಾಗಿರುವ ಒಣದ್ರಾಕ್ಷಿ ವಿತರಣೆ ಕುರಿತು ವಿಜಯಪುರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಜವಳಿ, ಕೃಷಿ ಮಾರುಕಟ್ಟೆ ಸಕ್ಕರೆಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.

ಭಾನುವಾರ ನಗರದಲ್ಲಿ ಮಹಾರಾಷ್ಟ್ರದ ಪುಣೆಯ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳ, ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಉತ್ಪಾದನೆಯಲ್ಲಿ  ಇತ್ತೀಚಿನ ಬೆಳವಣಿಗೆಗಳ  ಕುರಿತು ರಾಷ್ಟ್ರ ಮಟ್ಟದ ವಿಚಾರ  ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದ್ರಾಕ್ಷಿ  ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಹಾಲು, ಮೊಟ್ಟೆ,  ಬಾಳೆಹಣ್ಣು  ವಿತರಣೆ ಜೊತೆಗೆ ಒಣದ್ರಾಕ್ಷಿ ವಿತರಣೆ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿ, ವಿಜಯಪುರದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು.


ಇತಿಹಾದಲ್ಲೇ ಒಣದ್ರಾಕ್ಷಿ ಬೆಳೆಗೆ ಮೊದಲ ಬಾರಿಗೆ 500-600 ರೂ. ದರ ಸಿಕ್ಕಿದ್ದು, ಭವಿಷ್ಯದಲ್ಲಿ ಗುಣಮಟ್ಟದ ಮೌಲ್ಯವರ್ಧನೆ, ಗ್ರೇಡಿಂಗ್‍ನಂಥ ವಿಷುಯಗಳಿಗೆ ಆಧ್ಯತೆ ನೀಡಿದಲ್ಲಿ ದ್ರಾಕ್ಷಿ ಬೆಳೆಗಾರರಿಗೆಉತ್ತಮ ಭವಿಷ್ಯವಿದೆ ಎಂದರು.

ಇದೇವೇಳೆ ದ್ರಾಕ್ಷಿ ಬೆಳೆಯುವಲ್ಲಿ ಸಾಧನೆ ಮಾಡಿರುವ ಕರ್ನಾಟಕದ ವಿ.ಡಿ.ಪಾಟೀಲ, ಮಹಾರಾಷ್ಟ್ರದ ಸೋಲಾಪುರದ ಮಹಾದೇವ ಚಾಕೋಟೆ, ನಾಸಿಕ್ ನ ಅಶೋಕ ಗಾಯಕವಾಡ, ಪುಣೆಯ ಅನಿಲ ಮೆಹರೆ ಸಾಂಗಲಿಯ  ಜಗನ್ನಾಥ ಮಸ್ಕೆ, ತಮಿಳುನಾಡಿನ ಸೇಂಥಿಲಕುಮಾರ, ಆಂಧ್ರಪ್ರದೇಶದ ವೆಂಟಕರೆಡ್ಡಿ ಕನಕರೆಡ್ಡಿ ಇವರಿಗೆ ಸಚಿವ  ಶಿವಾನಂದ ಪಾಟೀಲ ಅವರು ದ್ರಾಕ್ಷಿ ಭೂಷಣ್ ಪ್ರಶಸ್ತಿ ಪ್ರದಾನ ಮಾಡಿದರು.

ಯುವ ಉದ್ಯಮಿಗಳಾದ ನಿಖಿತಾ ಬಿರಾದಾರ, ಅಣ್ಣಾರಾಯ ಬಿರಾದಾರ ಅವರು ಒಣದ್ರಾಕ್ಷಿಯಲ್ಲಿ ಉಪ್ಪು, ಖಾರ, ಚಾಕಲೇಟ್, ಪೇರಲ, ಕ್ರೈನಬರಿ, ಚಟಪಟಾ, ಪಾನ್ ಹಾಗೂ ಗುಲಾಬಿ ಹೂವಿನ ಸ್ವಾದದ ವಿವಿಧ ಮೌಲ್ಯವರ್ಧಿತ ಪ್ಯಾಕಿಂಗ್‍ನ ಸ್ನ್ಯಾಕ್ ಇನ್ ಬ್ರ್ಯಾಂಡ್‍ನ ಒಣದಾಕ್ಷಿ ಉತ್ಪನ್ನಗಳನ್ನು ಸಚಿವ ಶಿವಾನಂದ ಪಾಟೀಲ ಬಿಡುಗಡೆ ಮಾಡಿದರು.

ದ್ರಾಕ್ಷಿ ಬೆಳೆಗಾರರ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಸಚಿವ ಶಿವಾನಂದ ಪಾಟೀಲ ಅವರನ್ನು ಮಹಾರಾಷ್ಟ್ರದ ದ್ರಾಕ್ಷಿ ಬೆಳೆಗಾರರು ಒಣದ್ರಾಕ್ಷಿ ಹಾರಹಾಕಿ ವಿಶಿಷ್ಟವಾಗಿ  ಸನ್ಮಾನಿಸಿದರು.

ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳದ ಅಧ್ಯಕ್ಷರಾದ ಸೋಫನ್ ಕಾಂಚನ್, ಉಪಾಧ್ಯಕ್ಷ ಬಿ.ಎಂ.ಕೋಕರೆ, ಕೈಲಾಸ್ ಭೋಸಲೆ, ಎಸ್.ಡಿ.ಸಾವಂತ, ಮಾರುತಿ ಚವ್ಹಾಣ, ಎಸ್.ಡಿ.ಶಿಖಾಮಣಿ, ಪ್ರಕಾಶ ಗಣಿ, ಕೌಶಿಕ್ ಬ್ಯಾನರ್ಜಿ, ಬಾಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ಸೇರಿದಂತೆ ಇತರರು ಉಪಸ್ಥಿತರಿದ್ದರು.

Post a Comment

ನವೀನ ಹಳೆಯದು