ಕೂಡಲೇ ಪ್ರಧಾನಿ ಕ್ಷಮೆ ಕೋರುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಸದ ಜಿಗಜಿಣಗಿ ಒತ್ತಾಯ

ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರಿಗೆ ಶೋಭೆ ತರುವುದಿಲ್ಲ, ಕೂಡಲೇ ಖರ್ಗೆ ಅವರು ಪ್ರಧಾನಿ ಮೋದಿ ಅವರ ಕ್ಷಮೆ ಕೋರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.

ಕುರಿತು ಪತ್ರಿಕಾಹೇಳಿಕೆನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯವನ್ನು ವಿಶ್ವವೇ ಮೆಚ್ಚಿದೆ, ಬಡವರ ಪರ, ಅಭಿವೃದ್ಧಿ ಪರಯೋಜನೆಗಳನ್ನು ಅನುಷ್ಠಾನಗೊಳಿಸಿ ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿರುವ ಮೋದಿಜಿ ಅವರು ರಜೆ ಸಹ ಹಾಕದೇ ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಪದೇ ಪದೇಷ ಟೀಕಿಸುವ ಕಾರ್ಯ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕ್ರಮ ಖಂಡನೀಯ.

ರಾಜ್ಯ ಸರ್ಕಾರ ಸಂಪೂರ್ಣ ನಿಸ್ತೇಜವಾಗಿದೆ, ಅಭಿವೃದ್ಧಿ ಕಾರ್ಯಗಳೇ ಕುಂಠಿತವಾಗಿವೆ, ಬಡವರ ಆಶ್ರಯಮನೆಗಳನ್ನು ವಿತರಿಸಲು ಲಂಚದಸದ್ದು ಕೇಳಿ ಬರುತ್ತಿದೆ, ಅವರ ಪಕ್ಷದ ಸದಸ್ಯರೇ ವಿಷಯವನ್ನು ಹೊರ ಹಾಕಿದ್ದಾರೆ, ಇನ್ನೊಂದೆಡೆ ಮುಖ್ಯಮಂತ್ರಿಯಾಗುವ ತಂಡ, ಅಸಮಾಧಾನ, ವೈಮನಸ್ಸು ಹೀಗೆ ತಮ್ಮ ಪಕ್ಷದಲ್ಲಿಯೇ ಅನೇಕ ಸಮಸ್ಯೆಗಳಿವೆ, ಅವುಗಳ ಬಗ್ಗೆ ಎಐಸಿಸಿ ಅಧ್ಯಕ್ಷರು ಮಾತನಾಡಲಿ, ಜನರ ಹಿತ ಮರೆತಿರುವರಾಜ್ಯ ಸರ್ಕಾರದ ಕಿವಿ ಹಿಂಡಲಿ, ಅದನ್ನು ಬಿಟ್ಟು ಕೇವಲ ಪ್ರಧಾನಿ ಅವರನ್ನು ಟೀಕೆ ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆ ಸಹಜ, ಆದರೆ ಟೀಕೆ ಸಾತ್ವಿಕವಾಗಿರಬೇಕು, ಅಸಂಸದೀಯದ ಪದ, ಏಕವಚನ ಪದ ಪ್ರಯೋಗಿಸಿ ಒಬ್ಬ ಪ್ರಧಾನಿಯನ್ನು ಟೀಕಿಸುವುದು ಖರ್ಗೆ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಕೂಡಲೇ ಅವರು ಕ್ಷಮೆಯಾಚಿಸಬೇಕು,  ರೀತಿ ಇನ್ಮುಂದೆ ಪ್ರಧಾನಿ ಅವರ ಬಗ್ಗೆ ಅಗೌರವ ತೋರುವ ರೀತಿಯಲ್ಲಿ ಟೀಕೆ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.

Post a Comment

ನವೀನ ಹಳೆಯದು